The New Indian Express
ಬೆಂಗಳೂರು: ಉತ್ತರ ಕನ್ನಡದ ಕಾಂಗ್ರೆಸ್ ಪಕ್ಷದ ಮಾಜಿ ಎಂಎಲ್ಸಿಯೊಬ್ಬರು ಸಮುದಾಯ ಭವನಕ್ಕಾಗಿ ರಾಜ್ಯ ಸರ್ಕಾರದಿಂದ ಹಣ ಮಂಜೂರು ಮಾಡಿಸಿಕೊಂಡಿದ್ದಾರೆ. ಆದರೆ, ಅದನ್ನು ತನ್ನ ಹೆಸರಿನಲ್ಲಿ ಹಳಿಯಾಳದಲ್ಲಿ ಎಸ್ ಎಲ್ ಘೋಟ್ನೇಕರ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣಕ್ಕೆ ಬಳಸಿಕೊಂಡಿರುವುದು ಸಾಬೀತಾಗಿದೆ. ಶ್ರೀಕಾಂತ್ ಎಲ್ ಘೋಟ್ನೇಕರ್ ಅವರ ಎಂಎಲ್ಸಿ ಅವಧಿ ಇತ್ತೀಚಿಗಷ್ಟೇ ಮುಗಿದಿತ್ತು.
ತನಿಖೆ ವೇಳೆ ಇದು ಬೆಳಕಿಗೆ ಬಂದ ನಂತರ ಇತ್ತೀಚಿಗಷ್ಟೇ ಲೋಕಾಯುಕ್ತ ಹುದ್ದೆ ತ್ಯಜಿಸಿದ ನ್ಯಾಯಮೂರ್ತಿ ಪಿ ವಿಶ್ವನಾಥ ಶೆಟ್ಟಿ, ರಾಜ್ಯ ಸರ್ಕಾರ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ವರದಿಯನ್ನು ಸಲ್ಲಿಸಿ, ಹಣ ದುರ್ಬಳಕೆಗಾಗಿ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(1)ಎ ನೊಂದಿಗೆ ಐಪಿಸಿ ಸೆಕ್ಷನ್ 120 ಬಿ, 403, 406 ಅನ್ವಯ ಘೋಟ್ನೆಕರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, ಶೇ. 10 ರಷ್ಟು ಬಡ್ಡಿಯೊಂದಿಗೆ 5 ಲಕ್ಷ ರೂ. ವಸೂಲಿ ಮಾಡಬೇಕೆಂದು ಶಿಫಾರಸು ಮಾಡಿದ್ದರು.
ಪ್ರಸ್ತುತ ಶಾಲೆ ನಡೆಸುತ್ತಿರುವ ಹಳಿಯಾಳದ ಶ್ರೀ ಛತ್ರಪತಿ ಶಿವಾಜಿ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ರಾಯಣ್ಣ ಸೋಮನಿಂಗ ಅವರಿಂದಲೂ ವಾರ್ಷಿಕ ಶೇ. 10 ರಷ್ಟು ಬಡ್ಡಿಯೊಂದಿಗೆ ರೂ. 36.25 ಲಕ್ಷ ಹಣ ವಸೂಲಿ ಮಾಡಬೇಕೆಂದು ಲೋಕಾಯುಕ್ತರು ಶಿಫಾರಸು ಮಾಡಿದ್ದರು.
ವರದಿ ಪ್ರಕಾರ, ಹಳಿಯಾಳದಲ್ಲಿ ಕ್ಷತ್ರಿಯ ಮರಾಠ ಸಮುದಾಯದ ಸಮುದಾಯ ಭವನ ನಿರ್ಮಾಣಕ್ಕೆ ಘೋಟ್ನೆಕರ್ ಹಣವನ್ನು ಬಿಡುಗಡೆ ಮಾಡಿಸಿಕೊಂಡಿದ್ದರು. ಆದರೆ, ಅದನ್ನು ಶಾಲೆಯ ಕಟ್ಟಡದ ಮೊದಲ ಮಹಡಿಯಲ್ಲಿ ನಿರ್ಮಿಸಿದ್ದಾರೆ.
ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಉಪಾಧ್ಯಕ್ಷ ನಾಗೇಂದ್ರ ಜಿವೋಜಿ, ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದು, ಆರೋಪ ನಿಜವೆಂದು ತಿಳಿದುಬಂದಿದೆ. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಶಿಫಾರಸು ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ರಾಜ್ಯಪಾಲರಿಗೆ ವರದಿ ಸಲ್ಲಿಸಲಾಗಿತ್ತು.
ಶ್ರೀ ಛತ್ರಪತಿ ಶಿವಾಜಿ ಎಜುಕೇಶನ್ ಟ್ರಸ್ಟ್ ಸೇರಿದಂತೆ ಸಂಸ್ಥೆಗೆ ಹಾಗೂ ಘೋಟ್ನೇಕರ ಮತ್ತು ರಾಯಣ್ಣ ಸಂಬಂಧಿತ ಸಂಸ್ಥೆಗಳಿಗೆ ಐದು ವರ್ಷಗಳ ಅವಧಿಗೆ ಯಾವುದೇ ಉದ್ದೇಶಕ್ಕೆ ಅನುದಾನ ಬಿಡುಗಡೆ ಮಾಡದಂತೆ ಲೋಕಾಯುಕ್ತ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಪ್ರಸ್ತುತ ಬೀದರ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಗಿನ ಕಾರವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿ ಜಿಲ್ಲಾಧಿಕಾರಿ, ಬಸವರಾಜ ಮಹಾದೇವ ಬಡಿಗೇರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಲೋಕಾಯುಕ್ತ ಸೂಚಿಸಿದೆ.
Read more
[wpas_products keywords=”deal of the day”]