ಬೆಂಗಳೂರು: ಕೆಲ ಶಕ್ತಿಗಳು ವಿದ್ಯಾರ್ಥಿಗಳನ್ನು ವಿದ್ಯಾರ್ಥಿಗಳನ್ನು ತಪ್ಪು ಹಾದಿಗೆಳೆಯುತ್ತಿದ್ದು, ಹಿಜಾಬ್ ವಿವಾದದಿಂದ 2023ರ ಚುನಾವಣೆಗೆ ರಾಜಕೀಯ ಪಕ್ಷಗಳು ಲಾಭ ಪಡೆದುಕೊಳ್ಳುತ್ತಿವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ವಿಧಾನಸಭೆ ಚುನಾವಣೆಗೋಸ್ಕರ ಹಿಜಾಬ್ ವಿವಾದವನ್ನ ವಿವಿಧ ರಾಜಕೀಯ ಪಕ್ಷಗಳು ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿವೆ. ಈ ಪ್ರಕರಣದಲ್ಲಿ ಕೆಲವೊಂದು ದುಷ್ಟ ಹಿತಾಸಕ್ತಿಗಳ ಕೈವಾಡವಿದ್ದು, ವಿದ್ಯಾರ್ಥಿಗಳು ಹಾಗೂ ರಾಜಕೀಯ ಪಕ್ಷಗಳನ್ನ ತಪ್ಪು ದಾರಿಗೆ ತೆಗೆದುಕೊಂಡು ಹೋಗುತ್ತಿವೆ ಎಂದು ಹೇಳಿದ್ದಾರೆ.
There are some elements that are misleading the students and political parties are taking advantage for 2023 elections. The govt can stop this. Such issues divide the nation: Former Prime Mininster and Janata Dal-Secular (JDS) president HD Deve Gowda on Karnataka hijab issue pic.twitter.com/XBw6tzp8pM
— ANI (@ANI) February 7, 2022
ಕರಾವಳಿಯಲ್ಲಿ ಕಾಣಿಸಿಕೊಂಡಿದ್ದ ಈ ವಿವಾದಕ್ಕೆ ಅಲ್ಲಿನ ರಾಜಕೀಯ ಸಂಘಟನೆವೊಂದು ವಿವಾದದ ಕಿಡಿ ಹೊತ್ತಿಸಿದ್ದು, ಇದೀಗ ವಿವಿಧ ಪಕ್ಷಗಳು ಇದರ ರಾಜಕೀಯ ಲಾಭ ಪಡೆದುಕೊಳ್ಳುತ್ತಿವೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ವಿವಾದವನ್ನ ತಕ್ಷಣವೇ ಹತ್ತಿಕ್ಕಬೇಕು ಎಂದು ತಿಳಿಸಿದ್ದಾರೆ.
Read more
[wpas_products keywords=”deal of the day”]