ಮುಂದುವರಿದಂತೆ ಚನ್ನರಾಯಪಟ್ಟಣ, ಅರಕಲಗೂಡು, ಶನಿವಾರಸಂತೆ, ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ ಮೂಲಕ ಮಾಕುಟ್ಟ ಬಳಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ 183 ಕಿ.ಮೀ. ಉದ್ದದ 1600 ಕೋಟಿ ವೆಚ್ಚದ ಹೆದ್ದಾರಿ ನಿರ್ಮಾಣ ಯೋಜನೆಗೆ ಅಂತಿಮ ಒಪ್ಪಿಗೆ ನೀಡುವಂತೆ ಕೋರಿದರು. ಮನವಿಗೆ ಸ್ಪಂದಿಸಿದ ಸಚಿವರು, ಸಮ್ಮತಿ ನೀಡಿದರಲ್ಲದೇ ಮೈಸೂರು- ಬೆಂಗಳೂರು ದಶಪಥ ರಸ್ತೆಯುದ್ದಕ್ಕೂ ಬರುವ ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣ ನಗರಗಳಿಗೆ ಪ್ರವೇಶ ಮತ್ತು ನಿರ್ಗಮನ ಕಲ್ಪಿಸಲು ಪ್ರತ್ಯೇಕ ಯೋಜನೆಯಡಿ ಟೆಂಡರ್ ಕರೆಯಲು ಸೂಚನೆ ನೀಡಿದರು.
ಅನಗತ್ಯ ಪ್ರಭಾವದಿಂದಾಗಿ ಬೇಲೂರಿನಿಂದ ಬಿಳಿಕೆರೆವರೆಗಿನ ಹೆದ್ದಾರಿಯಲ್ಲಿ ಕೇವಲ ಹಾಸನದಿಂದ ಹೊಳೆನರಸೀಪುರದವರೆಗೆ (ಯಡೆಗೌಡನಹಳ್ಳಿ) ಮಾತ್ರ 4 ಪಥದ ರಸ್ತೆ ನಿರ್ಮಾಣವಾಗಿದ್ದು, ಬಾಕಿಯಿರುವ ಬೇಲೂರು- ಹಾಸನ, ಹೊಳೆನರಸೀಪುರ- ಬಿಳಿಕೆರೆ ಮಾರ್ಗವನ್ನೂ 4 ಪಥವಾಗಿಸಿ ಟೆಂಡರ್ ಕರೆಯಲು ಒಪ್ಪಿಗೆ ನೀಡಿದರು. ಜತೆಗೆ ಚನ್ನರಾಯಪಟ್ಟಣ, ಅರಕಲಗೂಡು, ಶನಿವಾರಸಂತೆ, ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ ಮೂಲಕ ಮಾಕುಟ್ಟ ಬಳಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ 183 ಕಿ.ಮೀ. ಉದ್ದದ 1600 ಕೋಟಿ ವೆಚ್ಚದ ಹೆದ್ದಾರಿ ನಿರ್ಮಾಣ ಯೋಜನೆಗೆ ಅಂತಿಮ ಒಪ್ಪಿಗೆ ನೀಡಲು ಸಮ್ಮತಿ ನೀಡಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಮಾಹಿತಿ ನೀಡಿದ್ದಾರೆ.