Karnataka news paper

ನಾನಾ ಹೆದ್ದಾರಿ ಕಾಮಗಾರಿಗೆ ಕೇಂದ್ರ ಅನುಮೋದನೆ; ನಿತಿನ್‌ ಗಡ್ಕರಿಗೆ ಸಂಸದ ಪ್ರತಾಪ ಸಿಂಹ ಅಭಿನಂದನೆ


ಮೈಸೂರು: ಮೈಸೂರು ಭಾಗದಲ್ಲಿ ನಾನಾ ಹೆದ್ದಾರಿ ಕಾಮಗಾರಿಗೆ ಅನುಮೋದನೆ ನೀಡುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಸಂಸದ ಪ್ರತಾಪ ಸಿಂಹ ಮನವಿ ಸಲ್ಲಿಸಿದರು.

ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು ಹಲವು ಯೋಜನೆಗಳಿಗೆ ಸಮ್ಮತಿ ಸೂಚಿಸಿದ್ದಾರೆ. ದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸದ ಪ್ರತಾಪ್‌ ಸಿಂಹ, ಮೈಸೂರು- ಬೆಂಗಳೂರು 10 ಪಥದ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ 6 ಪಟ್ಟಣಗಳನ್ನು ಸೇರುವ 5 ಬೈಪಾಸ್‌ಗಳಿಗೆ ಸರಿಯಾದ ಪ್ರವೇಶ ಹಾಗೂ ನಿರ್ಗಮನ ನೀಡುವ ಮೂಲಕ ಮೇಲ್ದರ್ಜೆಗೇರಿಸುವಂತೆ ಮತ್ತು ಎನ್‌.ಎಚ್‌-373 ಪ್ಯಾಕೇಜ್‌-02 ಹಾಸನ-ಬೇಲೂರು ಹಾಗೂ ಪ್ಯಾಕೇಜ್‌-04 ಯಡೆಗೌಡನಹಳ್ಳಿ- ಬಿಳಿಗೆರೆ ಎರಡು ಪಥದ ರಸ್ತೆಯನ್ನು ನಾಲ್ಕು ಪಥದ ರಸ್ತೆಗೆ ಮೇಲ್ದರ್ಜೆಗೇರಿಸುವಂತೆ ಕೋರಿದರು.
ಕನ್ನಡ ಧ್ವಜಕ್ಕೆ ಬೆಂಕಿ ವಿಚಾರ ಸದನದಲ್ಲಿ ಪ್ರಸ್ತಾಪ; ಇತ್ತ ಮರಾಠ ನಿಗಮ ಸ್ಥಾಪನೆಗೆ ಯತ್ನಾಳ್ ಒತ್ತಾಯ!
ಮುಂದುವರಿದಂತೆ ಚನ್ನರಾಯಪಟ್ಟಣ, ಅರಕಲಗೂಡು, ಶನಿವಾರಸಂತೆ, ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ ಮೂಲಕ ಮಾಕುಟ್ಟ ಬಳಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ 183 ಕಿ.ಮೀ. ಉದ್ದದ 1600 ಕೋಟಿ ವೆಚ್ಚದ ಹೆದ್ದಾರಿ ನಿರ್ಮಾಣ ಯೋಜನೆಗೆ ಅಂತಿಮ ಒಪ್ಪಿಗೆ ನೀಡುವಂತೆ ಕೋರಿದರು. ಮನವಿಗೆ ಸ್ಪಂದಿಸಿದ ಸಚಿವರು, ಸಮ್ಮತಿ ನೀಡಿದರಲ್ಲದೇ ಮೈಸೂರು- ಬೆಂಗಳೂರು ದಶಪಥ ರಸ್ತೆಯುದ್ದಕ್ಕೂ ಬರುವ ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣ ನಗರಗಳಿಗೆ ಪ್ರವೇಶ ಮತ್ತು ನಿರ್ಗಮನ ಕಲ್ಪಿಸಲು ಪ್ರತ್ಯೇಕ ಯೋಜನೆಯಡಿ ಟೆಂಡರ್‌ ಕರೆಯಲು ಸೂಚನೆ ನೀಡಿದರು.

ಅನಗತ್ಯ ಪ್ರಭಾವದಿಂದಾಗಿ ಬೇಲೂರಿನಿಂದ ಬಿಳಿಕೆರೆವರೆಗಿನ ಹೆದ್ದಾರಿಯಲ್ಲಿ ಕೇವಲ ಹಾಸನದಿಂದ ಹೊಳೆನರಸೀಪುರದವರೆಗೆ (ಯಡೆಗೌಡನಹಳ್ಳಿ) ಮಾತ್ರ 4 ಪಥದ ರಸ್ತೆ ನಿರ್ಮಾಣವಾಗಿದ್ದು, ಬಾಕಿಯಿರುವ ಬೇಲೂರು- ಹಾಸನ, ಹೊಳೆನರಸೀಪುರ- ಬಿಳಿಕೆರೆ ಮಾರ್ಗವನ್ನೂ 4 ಪಥವಾಗಿಸಿ ಟೆಂಡರ್‌ ಕರೆಯಲು ಒಪ್ಪಿಗೆ ನೀಡಿದರು. ಜತೆಗೆ ಚನ್ನರಾಯಪಟ್ಟಣ, ಅರಕಲಗೂಡು, ಶನಿವಾರಸಂತೆ, ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ ಮೂಲಕ ಮಾಕುಟ್ಟ ಬಳಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ 183 ಕಿ.ಮೀ. ಉದ್ದದ 1600 ಕೋಟಿ ವೆಚ್ಚದ ಹೆದ್ದಾರಿ ನಿರ್ಮಾಣ ಯೋಜನೆಗೆ ಅಂತಿಮ ಒಪ್ಪಿಗೆ ನೀಡಲು ಸಮ್ಮತಿ ನೀಡಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಮಾಹಿತಿ ನೀಡಿದ್ದಾರೆ.



Read more