Online Desk
ಬೆಂಗಳೂರು: ರಾಜ್ಯ ವಿಪ್ರ ಯುವ ಸಂಘಟನೆ ಸಂಚಾಲಕರಾಗಿ ವಕೀಲ, ಯುವ ಮುಖಂಡ ಸಂದೀಪ್ ರವಿ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾಗಿರುವ, ಮಾಜಿ ಅಡ್ವೊಕೇಟ್ ಜನರಲ್ ಅಶೋಕ್ ಹಾರನಹಳ್ಳಿ ಅವರು ಈ ಬಗ್ಗೆ ಅಧಿಕೃತ ಆದೇಶ ಪ್ರಕಟಿಸಿದ್ದಾರೆ. ಸಂದೀಪ್ ರವಿ ಅವರನ್ನು ನೇಮಕ ಮಾಡುವ ಸಂದರ್ಭದಲ್ಲಿ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಸೇರಿದಂತೆ ಸಂಘಟನೆಯ ಹಲವು ಮುಖಂಡರು ಭಾಗಿಯಾಗಿದ್ದರು.
ಅಶೋಕ್ ಹಾರನಹಳ್ಳಿ ಅವರು ಇತ್ತೀಚೆಗಷ್ಟೇ ಬ್ರಾಹ್ಮಣ ಮಹಾಸಭೆಯ ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಾರ್ಯೋಮುಖರಾಗಿದ್ದು ಹೊಸ ಪದಾಧಿಕಾರಿಗಳ ನೇಮಕ ಮಾಡಲಾಗುತ್ತಿದೆ.
Read more
[wpas_products keywords=”deal of the day”]