Karnataka news paper

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ಗೆ ಅಧಿಕಾರ: ಉಕ ಭಾಗದ 64 ಕ್ಷೇತ್ರಗಳಲ್ಲಿ ಗೆಲುವು: ಡಿಕೆಶಿ ವಿಶ್ವಾಸ


ಗದಗ: ಕರ್ನಾಟಕ ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗದ ವಿಧಾನಸಭೆ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಭಾನುವಾರ ನಗರದ ಕಾಟನ್‌ ಸೇಲ್‌ ಸೊಸೈಟಿ ಆವರಣದಲ್ಲಿ ಕಾಂಗ್ರೆಸ್‌ ಡಿಜಿಟಲ್‌ ಸದಸ್ಯತ್ವ ಅಭಿಯಾನದ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ 64 ವಿಧಾನಸಭೆ ಕ್ಷೇತ್ರಗಳಲ್ಲಿ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎನ್ನುವುದು ಸಮೀಕ್ಷೆಯಿಂದ ಗೊತ್ತಾಗಿದೆ. ಆದರೆ ಕಾರ್ಯಕರ್ತರು ವ್ಯಕ್ತಿಯನ್ನು ನೋಡಿ ಕೆಲಸ ಮಾಡುವುದಕ್ಕಿಂತ ಪಕ್ಷ ಆಧಾರಿತವಾಗಿ ಕೆಲಸ ಮಾಡಬೇಕು ಎಂದರು.

ಆ ಗುಂಪು ಈ ಗುಂಪು ಅಂತ ಇರಬಾರದು! ಬಣ ರಾಜಕೀಯದ ವಿರುದ್ಧ ಡಿಕೆಶಿ ಎಚ್ಚರಿಕೆ!
ಕಾಂಗ್ರೆಸ್‌ ತನ್ನದೇ ಆದ ಚರಿತ್ರೆ ಹೊಂದಿದೆ. ದೇಶಕ್ಕೆ ಸ್ವಾತಂತ್ರ್ಯ ಮಾತ್ರವಲ್ಲ, ದೇಶದಲ್ಲಿ ಬಹು ದೊಡ್ಡ ಬದಲಾವಣೆಗೂ ಕಾರಣವಾಗಿದೆ. ಇಂಥ ಪಕ್ಷ ಚುನಾವಣೆಯಲ್ಲಿ ಸೋತಿರಬಹುದು. ಮುಂದೆ ಗೆಲ್ಲುವುದು ನಿಶ್ಚಿತ. ಒಂದು ಕಾಲದಲ್ಲಿ ವಾಜಪೇಯಿ ಮತ್ತು ಅಡ್ವಾಣಿ ಮಾತ್ರ ಬಿಜೆಪಿಯನ್ನು ಪ್ರತಿನಿಧಿಸುತ್ತಿದ್ದರು. ಇವತ್ತು ಕೇಂದ್ರದಲ್ಲಿ ಅವರದ್ದೇ ಸರಕಾರ ಇದೆ. ಅದೇ ರೀತಿ ಕಾಂಗ್ರೆಸ್‌ ಸಹ ಪುಟಿದೇಳುತ್ತದೆ. ಕಾರ್ಯಕರ್ತರು ಸಂಘಟಿತರಾಗಬೇಕು ಎಂದರು.

ಹಿಜಾಬ್ v/s ಕೇಸರಿ ಸಂಘರ್ಷ: ಶಾಂತಿ, ಸೌಹಾರ್ದತೆ ಕಾಪಾಡಿಕೊಳ್ಳಬೇಕು; ಡಿಕೆಶಿ ಮನವಿ
ಉತ್ತರ ಪ್ರದೇಶ ಚುನಾವಣೆಯಲ್ಲಿ ಎಲ್ಲ ಪಕ್ಷಗಳು ತಮ್ಮ ಪ್ರಣಾಳಿಕೆ ಬಿಡುಗಡೆಗೊಳಿಸಿವೆ. ಬಿಜೆಪಿ ಪ್ರಣಾಳಿಕೆಯಲ್ಲಿ ಈ ಬಾರಿ ಪ್ರತಿ ಮನೆ ಸದಸ್ಯರಿಗೊಬ್ಬರಿಗೆ ಸರಕಾರಿ ಅಥವಾ ಖಾಸಗಿ ಉದ್ಯೋಗ ಕೊಡುವ ಭರವಸೆ ನೀಡಿದ್ದಾರೆ. ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಮೋದಿ ಸರಕಾರ, ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿತ್ತು. ಒಂದು ವೇಳೆ ಅದು ಕಾರ್ಯಗತವಾಗಿದ್ದರೆ ಉತ್ತರ ಪ್ರದೇಶದಲ್ಲಿ ಮನೆಗೊಂದು ಉದ್ಯೋಗ ಕೊಡುವ ಅವಶ್ಯಕತೆಯೇ ಇರುತ್ತಿರಲಿಲ್ಲ. ಇನ್ನು ಅಧಿಕಾರಕ್ಕೆ ಬಂದ ನಂತರ ಉಚಿತ ವಿದ್ಯುತ್‌ ಕೊಡುವ ವಾಗ್ದಾನ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಅದನ್ನು ಏಕೆ ಜಾರಿಗೊಳಿಸಲಿಲ್ಲ ಎಂದು ಪ್ರಶ್ನಿಸಿದರು.

ಶಾಸಕ ಎಚ್‌. ಕೆ. ಪಾಟೀಲ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಜಿ. ಎಸ್‌. ಪಾಟೀಲ ಮಾತನಾಡಿದರು.

ವಿಧಾನ ಪರಿಷತ್‌ ಸದಸ್ಯ ಸಲೀಂ ಅಹ್ಮದ್‌, ಮಾಜಿ ಶಾಸಕರಾದ ಡಿ. ಆರ್‌. ಪಾಟೀಲ, ಬಿ. ಆರ್‌. ಯಾವಗಲ್‌, ಶ್ರೀಶೈಲಪ್ಪ ಬಿದರೂರ, ರಾಮಕೃಷ್ಣ ದೊಡ್ಡಮನಿ, ಮುಖಂಡರಾದ ರವಿಕುಮಾರ ಪಾಟೀಲ, ಪಿ. ಟಿ. ಪರಮೇಶ್ವರ ನಾಯ್ಕ್, ಆರ್‌. ವಿ. ವೆಂಕಟೇಶ, ಎಸ್‌. ಎನ್‌. ಪಾಟೀಲ ಇತರರು ಉಪಸ್ಥಿತರಿದ್ದರು.

Hijab : ಎಚ್ಚರಿಕೆ ಹೆಜ್ಜೆಯಿರಿಸಲು ಕಾಂಗ್ರೆಸ್ ನಿರ್ಧಾರ : ಅಲ್ಪಸಂಖ್ಯಾತ ಮುಖಂಡರೊಂದಿಗೆ ಡಿಕೆಶಿ ಸಭೆ



Read more

[wpas_products keywords=”deal of the day sale today offer all”]