Karnataka news paper

ಗದ್ದೆಗಿಳಿದು ಭತ್ತ ನಾಟಿ ಮಾಡಿದ ಬಿವೈ ವಿಜಯೇಂದ್ರ : ಬಿಜೆಪಿ ಕಾರ್ಯಕರ್ತರು, ಮಂಡ್ಯ ರೈತರು ಸಾಥ್


ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗದ್ದೆಗಿಳಿದು, ಕೆಸರಲ್ಲಿ ಹೆಜ್ಜೆ ಹಾಕಿ, ಭತ್ತ ನಾಟಿ ಮಾಡಿ ರೈತರ ಮನಗೆದ್ದಿದ್ದಾರೆ.ಮಂಡ್ಯದ ಕೊತ್ತತ್ತಿ ಗ್ರಾಮದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯುವಕರನ್ನು ಕೃಷಿಯತ್ತ ಆಕರ್ಷಿಸುವುದು ಮತ್ತು ರೈತರಿಗೆ ಪ್ರೋತ್ಸಾಹ ನೀಡುವ ಕಾರಣಕ್ಕೆ ಇಂದು ನಾಟಿ ಕೆಲಸದಲ್ಲಿ ಭಾಗಿಯಾಗಿದ್ದೇನೆಂದು ವಿಜಯೇಂದ್ರ ಹೇಳಿದ್ದಾರೆ.

ಮಂಡ್ಯದಲ್ಲಿಂದು ವಿಜಯೇಂದ್ರ ಭತ್ತ ನಾಟಿ : ಕುಮಾರಸ್ವಾಮಿ ಹಾದಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಇದರ ಹಿಂದಿನ ಉದ್ದೇಶ ಏನು?

ಕೊತ್ತತ್ತಿ ಗ್ರಾಮದ ಸುಖೇಂದ್ರ ಮತ್ತು ಶಿವಬಸಪ್ಪ ಎಂಬ ರೈತರ ಎರಡು ಎಕರೆ ಜಮೀನಿನಲ್ಲಿ ಭತ್ತ ನಾಟಿ ಕಾರ್ಯಕ್ರಮ ನಡೆಯಿತು. ವಿಜಯೇಂದ್ರ ಅವರು ರೈತರೊಂದಿಗೆ ಗದ್ದೆಗಿಳಿದು ಭತ್ತ ನಾಟಿ ಮಾಡಿದರು. ನಂತರ ರೈತರೊಂದಿಗೆ ಸಂವಾದ ನಡೆಸಿ, ಅವರೊಂದಿಗೆ ಊಟ ಮಾಡಿದರು. ಈ ಕಾರ್ಯಕ್ರಮವು ರೈತರಿಗೆ ಉತ್ತೇಜನ ನೀಡುವ ಮತ್ತು ಯುವಕರನ್ನು ಕೃಷಿಯತ್ತ ಪ್ರೇರೇಪಿಸುವ ಉದ್ದೇಶ ಹೊಂದಿತ್ತು ಎಂದಿದ್ದಾರೆ. ಸ್ಥಳೀಯ ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಮಂಡ್ಯಕ್ಕೆ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು. ಕ್ರೇನ್ ಮೂಲಕ ಬೃಹತ್ ಕಬ್ಬಿನ ಹಾರ ಹಾಕಿ ಸ್ವಾಗತಿಸಲಾಯಿತು. ಮೆರವಣಿಗೆ, ಪಟಾಕಿ, ಪುಷ್ಪವೃಷ್ಟಿ ಮಾಡಲಾಯಿತು. ಬಳಿಕ ಅವರು ಸ್ವತಃ ಟ್ರಾಕ್ಟರ್ ಮತ್ತು ಎತ್ತಿನ ಗಾಡಿ ಚಲಾಯಿಸಿ ನೆರೆದಿದ್ದವರ ಅಚ್ಚರಿಗೆ ಕಾರಣವಾದರು.

ವಿಜಯೇಂದ್ರ ಅವರು ಮಂಡ್ಯಕ್ಕೆ ಆಗಮಿಸಿ ಮೊದಲು ಕ್ಯಾತುಂಗೆರೆಯ ವೀರಾಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ದೇವಾಲಯದಿಂದ ಕೊತ್ತತ್ತಿವರೆಗೆ ಮೆರವಣಿಗೆ ನಡೆಯಿತು. ಸಾವಿರಾರು ಬಿಜೆಪಿ ಕಾರ್ಯಕರ್ತರು ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಬೇವಿನಹಳ್ಳಿಯಲ್ಲಿ ಬೃಹತ್ ಪಟಾಕಿ ಸಿಡಿಸಿ, ಜೆಸಿಬಿ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು. ಬೈಕ್ ಮತ್ತು ಟ್ರಾಕ್ಟರ್ ಜಾಥಾ ಕೂಡ ನಡೆಯಿತು. ಮೆರವಣಿಗೆಯುದ್ದಕ್ಕೂ ಕೇಸರಿಮಯವಾಗಿತ್ತು.

ಕೊತ್ತತ್ತಿ ಗ್ರಾಮದಲ್ಲಿ ವಿಜಯೇಂದ್ರ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಮಂಗಳವಾದ್ಯಗಳು ಮತ್ತು ಜಾನಪದ ಕಲಾತಂಡಗಳು ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ಶಾಸಕ ಸತೀಶ್ ರೆಡ್ಡಿ, ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್, ಮಾಜಿ ಸಚಿವ ನಾರಾಯಣಗೌಡ, ಸ್ಥಳೀಯ ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಮುಂತಾದವರು ವಿಜಯೇಂದ್ರ ಅವರಿಗೆ ಸಾಥ್ ನೀಡಿದರು.

ರಾಜಕೀಯ ಚರ್ಚೆ ಏನು?

ರಾಜಕೀಯ ಪಕ್ಷಗಳು, ರಾಜಕಾರಣಿಗಳು ಏನೇ ಮಾಡಿದರೂ ಅದರ ಹಿಂದೆ ರಾಜಕೀಯ ಕಾರಣವೊಂದು ಇರುತ್ತದೆಂಬುದು ಬಹಿರಂಗ ಸತ್ಯ. ಮುಂದಿನ 2-3 ತಿಂಗಳಲ್ಲಿ ಜಿ.ಪಂ, ತಾ.ಪಂ. ಚುನಾವಣೆ ಎದುರಾಗಲಿದೆ. ಹೀಗಾಗಿ ಪಕ್ಷ ಸಂಘಟನೆ ಹಾಗೂ ಜನರನ್ನು ಬಿಜೆಪಿಯತ್ತ ಸೆಳೆಯುವುದು ಭತ್ತ ನಾಟಿ ಕಾರ‍್ಯದ ಹಿಂದಿನ ಉದ್ದೇಶವಿರಬಹುದೆಂಬ ಚರ್ಚೆಯು ಜಿಲ್ಲೆಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.



Read more

[wpas_products keywords=”deal of the day sale today offer all”]