ಹೈಲೈಟ್ಸ್:
- ಈ ಬಾರಿ ಬೆಳೆ ಹಾನಿ ದೊಡ್ಡ ಪ್ರಮಾಣದಲ್ಲಿ ಆಗಿದೆ
- ರಾಜ್ಯ ಸರ್ಕಾರದಿಂದ ಬೆಳೆ ಹಾನಿ ಹಾಗೂ ಮನೆ ಬಿದ್ದವರಿಗೆ ಪರಿಹಾರ ನೀಡಲಾಗಿದೆ
- ಬೆಳೆ ಹಾನಿ ಪರಿಹಾರ ಹೆಚ್ಚಳ ಮಾಡಿದ್ದೇವೆ: ಸಿಎಂ ಬಸವರಾಜ ಬೊಮ್ಮಾಯಿ
ಜಂಟಿ ಸರ್ವೆ ಮಾಡಿ ಅಪ್ಲೋಡ್ ಮಾಡಿ 40 ಗಂಟೆಗಳಲ್ಲಿ ಪರಿಹಾರ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ 980 ಕೋಟಿ ರೈತರಿಗೆ ಪರಿಹಾರ ತಲುಪಿದೆ ಎಂದು ತಿಳಿಸಿದರು.
ಈ ಬಾರಿ ಬೆಳೆ ಹಾನಿ ದೊಡ್ಡ ಪ್ರಮಾಣದಲ್ಲಿ ಆಗಿದೆ. ರಾಜ್ಯ ಸರ್ಕಾರದಿಂದ ಬೆಳೆ ಹಾನಿ ಹಾಗೂ ಮನೆ ಬಿದ್ದವರಿಗೆ ಪರಿಹಾರ ನೀಡಿದ್ದೇವೆ. ಯಾವುದೇ ರೀತಿಯ ತೊಂದರೆ, ಕೊರತೆ ಆಗದ ರೀತಿ ಪ್ರವಾಹ ನಿರ್ವಹಣೆ ಮಾಡಿದ್ದೇವೆ. ಬೆಳೆ ಹಾನಿ ಪರಿಹಾರ ಇನ್ನಷ್ಟು ಹೆಚ್ಚಿಗೆ ಆಗಬೇಕು ಎಂಬ ಚಿಂತನೆ ಇತ್ತು. ಆ ಕಾರಣಕ್ಕೆ ನಷ್ಟಕ್ಕೆ ಪರಿಹಾರ ಹೆಚ್ಚಳ ಮಾಡಿದ್ದೇವೆ. ಒಣ ಬೇಸಾಯ ಭೂಮಿಗೆ 1 ಹೆಕ್ಟೇರ್ಗೆ 6,800 ರೂಪಾಯಿ ಪರಿಹಾರ ನಿಗದಿಯಾಗಿತ್ತು. ಇದಕ್ಕೆ ರಾಜ್ಯ ಸರ್ಕಾರದಿಂದ 6,800 ರೂ. ಹೆಚ್ಚುವರಿ ಹಣ ಸೇರಿಸಲಾಗಿದೆ. ಇದೀಗ ಒಟ್ಟು ಪ್ರತಿ ಹೆಕ್ಟೇರ್ಗೆ 13,600 ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ನೀರಾವರಿ ಜಮೀನಿಗೆ ಪ್ರತಿ ಹೆಕ್ಟೇರ್ಗೆ 13,500 ರೂಪಾಯಿ ಪರಿಹಾರ ನೀಡಲಾಗುತ್ತಿತ್ತು. ಅದಕ್ಕೆ ಹೆಚ್ಚುವರಿಯಾಗಿ 11,000 ರೂಪಾಯಿ ಸೇರಿಸುವ ಮೂಲಕ 25 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ತಿಳಿಸಿದರು. ಇದರಿಂದ
12 ಲಕ್ಷದ 69 ಹೆಕ್ಟೇರ್ ಪ್ರದೇಶಕ್ಕೆ ಅನುಕೂಲ ಆಗುತ್ತದೆ ಎಂದು ಸಿಎಂ ತಿಳಿಸಿದರು.
ಈ ಕೂಡಲೇ ಪರಿಹಾರ ಬಿಡುಗಡೆ ಮಾಡುತ್ತೇವೆ. ನಮ್ಮ ಸರ್ಕಾರ ಸದಾ ಕಾಲ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಬಂದಿದೆ.
ಸದನದ ಆಗ್ರಹ ಕೂಡ ಇತ್ತು. ಹೀಗಾಗಿ, ಕೋವಿಡ್ ಇತಿ ಮಿತಿ ಒಳಗೆ ಪರಿಹಾರ ಕೊಡಲು ತೀರ್ಮಾನ ಮಾಡಿದ್ದೇವೆ. ಇದರಿಂದ 1200 ಕೋಟಿ ರೂ. ಹೆಚ್ಚುವರಿ ರಾಜ್ಯ ಸರ್ಕಾರದ ಮೇಲೆ ಹೊರೆ ಬೀಳಲಿದೆ ಎಂದು ಸಿಎಂ ತಿಳಿಸಿದರು.
ಇನ್ನು ತೋಟಗಾರಿಕೆ ಜಮೀನಿಗೆ ಪ್ರತಿ ಹೆಕ್ಟೇರ್ಗೆ 18,000 ಸಾವಿರ ರೂ. ನಿಗದಿ ಆಗಿದೆ. ಅದಕ್ಕೆ ಅಧಿಕವಾಗಿ ಹತ್ತು ಸಾವಿರ ರೂ. ಸೇರಿಸಿ 28 ಸಾವಿರ ರೂ. ಪರಿಹಾರ ಕೊಡ್ತೇವೆ ಎಂದು ಸಿಎಂ ತಿಳಿಸಿದರು.