Karnataka news paper

ರಹೀಂ ಹತ್ಯೆ ಕೇಸ್‌ನಲ್ಲಿ 15 ಮಂದಿ ವಿರುದ್ಧ FIR; ಶೀಘ್ರದಲ್ಲೇ ಆರೋಪಿಗಳ ಬಂಧನ: ಎಡಿಜಿಪಿ ಹಿತೇಂದ್ರ


ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಟೆಂಪೊ ಚಾಲಕ ಅಬ್ದುಲ್ ರಹೀಂ ಎಂಬುವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದು, ಈ ಸಂಬಂಧ 15 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಆರ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು, ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಹೈಲೈಟ್ಸ್‌:

  • ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಟೆಂಪೊ ಚಾಲಕ ಅಬ್ದುಲ್ ರಹೀಂ ಕೊಲೆ ಪ್ರಕರಣ
  • ಈ ಸಂಬಂಧ 15 ಜನರ ವಿರುದ್ಧ ಎಫ್‌ಐಆರ್, 5 ತಂಡಗಳಿಂದ ತನಿಖೆ, ಹಲವರ ವಿಚಾರಣೆ
  • ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಆರ್
  • ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಭರವಸೆ ನೀಡಿದ ಹಿತೇಂದ್ರ



Source link