ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಮತ್ತು ದ್ವೇಷ ಬಿತ್ತುವವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ, ಮುಸ್ಲಿಂ ಮುಖಂಡರು ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಅಬ್ದುಲ್ ರಹೀಂ ಹತ್ಯೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಾಯಕರು ರಾಜೀನಾಮೆ ಘೋಷಿಸಿದ್ದಾರೆ. ಶಾಂತಿ ಕಾಪಾಡುವಲ್ಲಿ ಸರಕಾರ ವಿಫಲವಾಗಿದ್ದು, ಹುದ್ದೆ ತೊರೆಯುವುದಾಗಿ ಮುಖಂಡರು ತಿಳಿಸಿದ್ದಾರೆ.
ಹೈಲೈಟ್ಸ್:
ಕಾರ್ಯಕರ್ತರ ಆಕ್ರೋಶಕ್ಕೆ ಮಣಿದ ಮುಸ್ಲಿಂ ನಾಯಕರು, ಪಕ್ಷಕ್ಕೆ ರಾಜೀನಾಮೆ
ಗೊಂದಲದ ಗೂಡಾದ ಮಂಗಳೂರಿನ ಸಭೆ, ಸಿಎಂ ಗಡುವಿಗೆ ಕ್ಯಾರೇ ಎನ್ನದ ಸಭೆ
ಕಾಂಗ್ರೆಸ್ ಅನ್ನೇ ನಾವೆಲ್ಲ ನಂಬಿಕೊಂಡಿದ್ದೇವೆ, ಆದರೂ ಕ್ರಮ ಕೈಗೊಳ್ಳುವಲ್ಲಿ ತಾರತಮ್ಯ
ಕೊಲೆಗಳಿಗೆ ಪ್ರಚೋದನೆ ನೀಡುವವರ ವಿರುದ್ಧ ಕ್ರಮವಿಲ್ಲ, , ಪಕ್ಷದಲ್ಲಿದ್ದು ಏನು ಪ್ರಯೋಜನ ಎಂದು ಆಕ್ರೋಶ