Karnataka news paper

ಸಿದ್ದರಾಮಯ್ಯ ಗಡುವಿಗೂ ಡೋಂಟ್‌ ಕೇರ್‌, ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ಬಿಸಾಕಿದ ಮುಸ್ಲಿಮರು


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಮತ್ತು ದ್ವೇಷ ಬಿತ್ತುವವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಕಾಂಗ್ರೆಸ್‌ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ, ಮುಸ್ಲಿಂ ಮುಖಂಡರು ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಅಬ್ದುಲ್ ರಹೀಂ ಹತ್ಯೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಾಯಕರು ರಾಜೀನಾಮೆ ಘೋಷಿಸಿದ್ದಾರೆ. ಶಾಂತಿ ಕಾಪಾಡುವಲ್ಲಿ ಸರಕಾರ ವಿಫಲವಾಗಿದ್ದು, ಹುದ್ದೆ ತೊರೆಯುವುದಾಗಿ ಮುಖಂಡರು ತಿಳಿಸಿದ್ದಾರೆ.

ಹೈಲೈಟ್ಸ್‌:

  • ಕಾರ್ಯಕರ್ತರ ಆಕ್ರೋಶಕ್ಕೆ ಮಣಿದ ಮುಸ್ಲಿಂ ನಾಯಕರು, ಪಕ್ಷಕ್ಕೆ ರಾಜೀನಾಮೆ
  • ಗೊಂದಲದ ಗೂಡಾದ ಮಂಗಳೂರಿನ ಸಭೆ, ಸಿಎಂ ಗಡುವಿಗೆ ಕ್ಯಾರೇ ಎನ್ನದ ಸಭೆ
  • ಕಾಂಗ್ರೆಸ್‌ ಅನ್ನೇ ನಾವೆಲ್ಲ ನಂಬಿಕೊಂಡಿದ್ದೇವೆ, ಆದರೂ ಕ್ರಮ ಕೈಗೊಳ್ಳುವಲ್ಲಿ ತಾರತಮ್ಯ
  • ಕೊಲೆಗಳಿಗೆ ಪ್ರಚೋದನೆ ನೀಡುವವರ ವಿರುದ್ಧ ಕ್ರಮವಿಲ್ಲ, , ಪಕ್ಷದಲ್ಲಿದ್ದು ಏನು ಪ್ರಯೋಜನ ಎಂದು ಆಕ್ರೋಶ



Source link