ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಆರ್ಸಿಬಿ ಕಾಲ್ತುಳಿತ ಪ್ರಕರಣದ ಬಗ್ಗೆ ಮಾತನಾಡಿದರು. ಸರ್ಕಾರದಿಂದ ಯಾವುದೇ ತಪ್ಪಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಹೆಚ್.ಡಿ. ಕುಮಾರಸ್ವಾಮಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು. ಪೊಲೀಸರ ಮೇಲೆ ಇದ್ದಕ್ಕಿದ್ದ ಹಾಗೆ ಪ್ರೀತಿ ತೋರಿಸುತ್ತಿದ್ದಾರೆ ಎಂದು ಟೀಕಿಸಿದರು. ಕಾಲ್ತುಳಿತದ ಬಗ್ಗೆ ಪೊಲೀಸರು ತಡವಾಗಿ ಮಾಹಿತಿ ನೀಡಿದ್ದಾರೆ. ತಪ್ಪು ಮಾಡಿದವರ ಮೇಲೆ ಕ್ರಮ ಕೈಗೊಂಡಿದ್ದೇವೆ ಎಂದು ಸಿಎಂ ಹೇಳಿದರು. ಕುಂಭಮೇಳದಲ್ಲಿ ಸಾವು ಸಂಭವಿಸಿದಾಗ ಪ್ರಧಾನಿ ರಾಜೀನಾಮೆ ನೀಡಿದ್ರಾ ಎಂದು ಪ್ರಶ್ನಿಸಿದರು.
ಹೈಲೈಟ್ಸ್:
ಆರ್ ಸಿಬಿ ಕಾಲ್ತುಳಿತ ಪ್ರಕರಣದಲ್ಲಿ ಸಿಎಂ ರಾಜೀನಾಮೆಗೆ ಹೆಚ್ ಡಿಕೆ ಒತ್ತಾಯ