Online Desk
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 321 ಹೊಸ ಸೋಂಕು ಪ್ರಕರಣಗಳು ಮತ್ತು 4 ಸಾವು ವರದಿಯಾಗಿದೆ.
Today’s Media Bulletin 22/12/2021
Please click on the link below to view bulletin.https://t.co/iY9EVEX7D9 @PMOIndia @MoHFW_INDIA @CMofKarnataka @BSBommai @mla_sudhakar @Comm_dhfwka @BBMPCOMM @mangalurucorp @DDChandanaNews @PIBBengaluru @KarnatakaVarthe pic.twitter.com/21ilJZFbSw— K’taka Health Dept (@DHFWKA) December 22, 2021
ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಇಂದು ಒಟ್ಟು 321 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, 4 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 38299ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರು ನಗರವೊಂದರಲ್ಲಿಯೇ 211 ಮಂದಿ ಸೋಂಕಿತರು ಪತ್ತೆಯಾಗಿದ್ದು, ಸೋಂಕಿನಿಂದ ನಗರದಲ್ಲಿ ಯಾವುದೇ ರೋಗಿಗಳು ಸಾವನ್ನಪ್ಪಿಲ್ಲ. ಇನ್ನು ರಾಜ್ಯಾದ್ಯಂತ ಇಂದು 253 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಗುಣಮುಖರ ಸಂಖ್ಯೆ 2957799ಕ್ಕೇರಿದೆ. ಪ್ರಸ್ತುತ ರಾಜ್ಯದಲ್ಲಿ 7138 ಸಕ್ರಿಯ ಪ್ರಕರಣಗಳಿವೆ.
Covid numbers in Karnataka today:
New cases in State: 321
New cases in B’lore: 211
New Omicron cases today: 00
Total Omicron cases: 19
Positivity rate: 0.32%
Discharges: 253 (B’lore- 162)
Deaths: 04 (B’lore- 00)
Tests: 97,897#COVID19 #Omicron— Dr Sudhakar K (@mla_sudhakar) December 22, 2021
ಅಂತೆಯೇ ಇಂದು ರಾಜ್ಯದಲ್ಲಿ ಯಾವುದೇ ಹೊಸ ಓಮಿಕ್ರಾನ್ ಸೋಂಕಿತರು ಪತ್ತೆಯಾಗಿಲ್ಲ. ಪ್ರಸ್ತುತ ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 19ರಲ್ಲಿಯೇ ಇದೆ. ರಾಜ್ಯದಲ್ಲಿ ಪ್ರಸ್ತುತ ಪಾಸಿಟಿವಿಟಿ ದರ ಶೇ.0.32ರಷ್ಟಿದ್ದು, ಮರಣ ಪ್ರಮಾಣ ಶೇ.1.24ರಷ್ಟಿದೆ.