Karnataka news paper

ಹೈಕೋರ್ಟ್‌ ನ್ಯಾಯಪೀಠಗಳ ಕಲಾಪದ ನೇರ ಪ್ರಸಾರದ ನಿಯಮಗಳಿಗೆ ರಾಜ್ಯ ಸರ್ಕಾರದ ಸಮ್ಮತಿ


ಬೆಂಗಳೂರು: ಹೈಕೋರ್ಟ್‌ ನ್ಯಾಯಪೀಠಗಳ ಕಲಾಪವನ್ನು ಯೂಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡುವುದಕ್ಕೆ ಸಂಬಂಧಿಸಿದ ಲೈವ್‌ ಸ್ಟ್ರೀಮಿಂಗ್‌ ಮತ್ತು ಕಲಾಪದ ಪ್ರಕ್ರಿಯೆ ರೆಕಾರ್ಡಿಂಗ್‌ ನಿಯಮಗಳಿಗೆ ರಾಜ್ಯ ಸರಕಾರ ಸಮ್ಮತಿಸಿದೆ.

ಆ ನಿಯಮಗಳ ಕುರಿತು ಒಂದು ವಾರದಲ್ಲಿ ಗೆಜೆಟ್‌ ಅಧಿಸೂಚನೆ ಹೊರಡಿಸುವಂತೆ ಸರಕಾರಕ್ಕೆ ಗುರುವಾರ ಹೈಕೋರ್ಟ್‌ ನಿರ್ದೇಶನ ನೀಡಿದೆ. ಇ-ಫೈಲಿಂಗ್‌ ಮತ್ತು ಲೈವ್‌ ಸ್ಟ್ರೀಮಿಂಗ್‌ ಸಂಬಂಧ ವಕೀಲ ದಿಲ್ರಾಜ್‌ ರೋಹಿತ್‌ ಸೀಕ್ವೈರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ. ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ನಿಯಮಗಳು ಜಾರಿಗೆ ಬರುವ ದಿನಾಂಕ ಉಲ್ಲೇಖಿಸಿ ರಿಜಿಸ್ಟ್ರಾರ್‌ ಜನರಲ್‌ ಅಧಿಸೂಚನೆ ಹೊರಡಿಸಬೇಕಿದೆ. ಈ ನಿಯಮಗಳಿಗೆ ಸಂಬಂಧಿಸಿ ತಕ್ಷಣ ಅಧಿಸೂಚನೆ ಹೊರಡಿಸಿ ಒಂದು ವಾರದಲ್ಲಿ ಅಧಿಕೃತ ಗೆಜೆಟ್‌ನಲ್ಲಿ ರಾಜ್ಯ ಸರಕಾರ ಪ್ರಕಟಿಸಬೇಕೆಂದು ನ್ಯಾಯಾಲಯ ನಿರ್ದೇಶನ ನೀಡಿತು.
ಬೆಂಗಳೂರಿನಲ್ಲಿ ಮಸೀದಿಗಳ ಧ್ವನಿವರ್ಧಕಗಳನ್ನು ತೆರವುಗೊಳಿಸಲು ಮುಂದಾದ ಪೊಲೀಸರು
ಸರಕಾರಿ ವಕೀಲರು, ಲೈವ್‌ ಸ್ಟ್ರೀಮಿಂಗ್‌ ಮತ್ತು ಕಲಾಪದ ಪ್ರಕ್ರಿಯೆ ರೆಕಾರ್ಡಿಂಗ್‌ ನಿಯಮಗಳಿಗೆ ಯಾವುದೇ ತಿದ್ದುಪಡಿ ಮಾಡದೆ ಸರಕಾರ ಒಪ್ಪಿಕೊಂಡಿದೆ. ಬುಧವಾರವಷ್ಟೇ ರಾಜ್ಯಪಾಲರು ನಿಯಮಗಳಿಗೆ ಅಂಕಿತ ಹಾಕಿದ್ದಾರೆ. ಈಗ ನಿಯಮಗಳನ್ನು ಗೆಜೆಟ್‌ನಲ್ಲಿ ಪ್ರಕಟಿಸಬೇಕಿದೆ. ಅದಕ್ಕೆ ಸಮಯ ನೀಡಬೇಕು ಎಂದು ಕೋರಿದರು. ನ್ಯಾಯಾಲಯದ ಕಲಾಪವನ್ನು ಲೈವ್‌ ಸ್ಟ್ರೀಮಿಂಗ್‌ ಮಾಡುವುದಕ್ಕೆ ಸಂಬಂಧಿಸಿದಂತೆ ರೂಪಿಸಲಾಗಿರುವ ನಿಯಮಗಳಿಗೆ ಕರ್ನಾಟಕ ಹೈಕೋರ್ಟ್‌ನ ಪೂರ್ಣಪೀಠವು ಸೆ.17ರಂದು ಒಪ್ಪಿಗೆ ನೀಡಿತ್ತು. ಪೂರ್ವ ತಯಾರಿಯ ಭಾಗವಾಗಿ ಮುಖ್ಯ ನ್ಯಾಯಮೂರ್ತಿ ಪೀಠದಿಂದ ಆಯ್ದ ಪ್ರಕರಣಗಳನ್ನು ಲೈವ್‌ ಸ್ಟ್ರೀಮ್‌ ಸಹ ಮಾಡಲಾಗಿತ್ತು.
ಮಲ ತಾಯಿಗಿಂತ ಹೆತ್ತ ತಾಯಿ ಬಳಿಯೇ ಮಗು ಬೆಳೆಯುವುದು ನ್ಯಾಯ; ಹೈಕೋರ್ಟ್
ಬೆಳಗಾವಿ ಜಗತ್ತಿನ ಹೊರಗಿದೆಯೆ?
ಸದ್ಯ ಎಲ್ಲ ಅಧಿಕಾರಿಗಳು ಬೆಳಗಾವಿಯಲ್ಲಿ ಇದ್ದಾರೆ. ರಾಜ್ಯಪಾಲರು ಅಂಕಿತ ಹಾಕಿರುವ ಮಾಹಿತಿ ಸಿಕ್ಕಿದೆ. ಉಳಿದ ಮಾಹಿತಿ ದೊರಕುತ್ತಿಲ್ಲ. ಸ್ವಲ್ಪ ಸಮಯ ನೀಡಿದರೆ ಗೆಜೆಟ್‌ ಪ್ರಕಟಣೆ ಸೇರಿದಂತೆ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಸರಕಾರಿ ವಕೀಲರು ಹೇಳಿದರು. ಆಗ ಸಿಜೆ ‘ಬೆಳಗಾವಿಯೇನು ಜಗತ್ತಿನ ಹೊರಗಿದೆಯೇ’ ಎಂದು ಖಾರವಾಗಿ ಪ್ರಶ್ನಿಸಿದರು. ಸುಮ್ಮನೆ ಕಾರಣ ಹೇಳಬೇಡಿ, ನಿಮ್ಮ ಬಳಿ ಸಮರ್ಪಕ ಮಾಹಿತಿಯೇ ಇಲ್ಲ ಎಂದು ತರಾಟೆಗೆ ತೆಗೆದುಕೊಂಡರು.



Read more