ಬೆಂಗಳೂರು: ವೈಕುಂಠ ಏಕಾದಶಿ ಮತ್ತು ಸಂಕ್ರಾತಿ ಹಬ್ಬಗಳಿಗೆ ಪ್ರತ್ಯೇಕ ಆದೇಶ ಹೊರಡಿಸಲಾಗಿದ್ದು, ಇವೆರಡೂ ಹಬ್ಬಗಳ ಪ್ರಯುಕ್ತ ಶಾಸ್ತ್ರ– ಸಂಪ್ರದಾಯಗಳ ಪ್ರಕಾರ, ದೇವಾಲಯಗಳ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜಾ ಕೈಂಕರ್ಯ ನಡೆಸಲು ಅನುಮತಿ ನೀಡಲಾಗಿದೆ.
ವೈಕುಂಠ ಏಕಾದಶಿ ದಿನದಂದು ಈಗಾಗಲೇ ನಿಗದಿಪಡಿಸಿರುವಂತೆ ಪೂರ್ಣ ಪ್ರಮಾಣದ ಕೋವಿಡ್–19 ಲಿಸಿಕೆ ಎರಡು ಡೋಸ್ಗಳನ್ನು ಪಡೆದ 50 ಜನರಿಗೆ ಮಾತ್ರ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ನೀಡಬೇಕು. ಯಾವುದೇ ಸೇವೆ, ಇತ್ಯಾದಿಗಳಿಗೆ ಅವಕಾಶವಿಲ್ಲ.
ಹಬ್ಬಗಳ ಆಚರಣೆಯ ಸಲುವಾಗಿ ಯಾವುದೇ ರೀತಿಯ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತೆಯೂ ಇಲ್ಲ. ಬಿಬಿಎಂಪಿ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ಪರಿಸ್ಥಿತಿ ಅವಲೋಕಿಸಿ ಇನ್ನೂ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ತಿಳಿಸಿದ್ದಾರೆ.
Karnataka Covid Updates: ಕೇಸ್ ಪಾಸಿಟಿವಿಟಿ ಪ್ರಮಾಣ ಶೇ 10ಕ್ಕೆ ನೆಗೆತ!
Read more from source
[wpas_products keywords=”deal of the day sale today kitchen”]