ಹೈಲೈಟ್ಸ್:
- ರಾಜ್ಯದಲ್ಲಿ ಮತ್ತೆ 300ರ ಗಡಿ ದಾಟಿದ ಕೋವಿಡ್ ಪ್ರಕರಣಗಳು
- ರಾಜ್ಯದಲ್ಲಿ ಇನ್ನೂ ಇವೆ 7000ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು
- ರಾಜ್ಯಾದ್ಯಂತ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲೂ ಏರಿಕೆ
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3003265ಕ್ಕೆ ಏರಿಕೆಯಾಗಿದೆ. ಇತ್ತೀಚೆಗಷ್ಟೇ ರಾಜ್ಯದಲ್ಲಿ ಓಮಿಕ್ರಾನ್ ರೂಪಾಂತರಿ ತಳಿ ವೈರಸ್ ಕೂಡ ಪತ್ತೆಯಾಗಿದ್ದು, ರಾಜ್ಯದಲ್ಲಿ ಈಗಾಗಲೇ ಹಲವು ಪ್ರಕರಣಗಳು ಪತ್ತೆಯಾಗಿದೆ. ಓಮಿಕ್ರಾನ್ ಅಲೆ ಶೀಘ್ರದಲ್ಲೇ ಉಲ್ಬಣಗೊಳ್ಳಲಿದೆ ಎಂಬ ಭೀತಿಯೂ ಎದುರಾಗಿದೆ.
ರಾಜ್ಯಾದ್ಯಂತ 253 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಒಟ್ಟು ಬಿಡುಗಡೆಯಾದವರ ಸಂಖ್ಯೆ 29,57,799ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣ ಸಂಖ್ಯೆ 7138ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿಯಲ್ಲಿ ತಿಳಿಸಿದೆ.
ಸೋಂಕಿನಿಂದ ಸಂಭವಿಸುವ ಸಾವಿನ ಪ್ರಮಾಣದಲ್ಲಿ ಕೊಂಚ ಕಡಿಮೆಯಾಗಿದೆ. ಬುಧವಾರ 4 ಮಂದಿ ಮೃತಪಟ್ಟಿದ್ದು, ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 38,299ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.32ಕ್ಕೆ ಇಳಿಕೆಯಾದರೆ, ಮರಣ ಪ್ರಮಾಣ ಶೇ. 1.24ಕ್ಕೆ ಏರಿಕೆಯಾಗಿದೆ.
ಬೆಂಗಳೂರಲ್ಲಿ 211 ಸೋಂಕು
ಬೆಂಗಳೂರು ನಗರದಲ್ಲಿ ಬುಧವಾರ 211 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 162 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ನಗರದಲ್ಲಿ ಇನ್ನೂ 5740 ಸಕ್ರಿಯ ಪ್ರಕರಣಗಳಿವೆ. ದಕ್ಷಿಣ ಕನ್ನಡ 20, ಕೊಡಗು 20, ಮೈಸೂರು 19, ಉತ್ತರ ಕನ್ನಡದಲ್ಲಿ 13 ಪ್ರಕರಣಗಳು ಪತ್ತೆಯಾಗಿವೆ. ಉಳಿದ ಕೆಲವು ಜಿಲ್ಲೆಗಳಲ್ಲಿ ಬೆರಳೆಣಿಕೆ ಸಂಖ್ಯೆಯ ಪ್ರಕರಣಗಳಿವೆ.
12 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ
ಬಾಗಲಕೋಟೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಮನಗರ, ಯಾದಗಿರಿಯಲ್ಲಿ ಇಂದು ಶೂನ್ಯ ಪ್ರಕರಣ ವರದಿಯಾಗಿದೆ. ಯಾದಗಿರಿ ಜಿಲ್ಲೆ ಕೊರೊನಾ ಮುಕ್ತ ಜಿಲ್ಲೆಗಳಾಗಿ ಹೊರಹೊಮ್ಮಿದೆ. ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ತಲಾ 1 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಸೋಂಕಿನ ಸಂಖ್ಯೆ:
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 211, ಬೀದರ್ 1, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 2, ಚಿತ್ರದುರ್ಗ 2, ದಕ್ಷಿಣಕನ್ನಡ 20, ದಾವಣಗೆರೆ 0, ಧಾರವಾಡ 4, ಗದಗ 0, ಹಾಸನ 5, ಹಾವೇರಿ 0, ಕಲಬುರಗಿ 0, ಕೊಡಗು 20, ಕೋಲಾರ 1, ಕೊಪ್ಪಳ 0, ಮಂಡ್ಯ 1, ಮೈಸೂರು 19, ರಾಯಚೂರು 1, ರಾಮನಗರ 0, ಶಿವಮೊಗ್ಗ 3, ತುಮಕೂರು 6, ಉಡುಪಿ 5, ಉತ್ತರಕನ್ನಡ 13, ವಿಜಯಪುರ 1, ಯಾದಗಿರಿ 0.